ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ಕಮತನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿಯೊಂದರಲ್ಲಿ ಸುಮಾರು 6 ಅಡಿ ಉದ್ದದ ಬೃಹತ್ ಹಾವೊಂದು ದಿಢೀರನೆ ಪ್ರತ್ಯಕ್ಷವಾಗಿ, ಕೆಲಕಾಲ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಿಸಿದ ಘಟನೆ ಇತ್ತೀಚೆಗೆ ನಡೆದಿದೆ.
ಶಾಲಾ ಕೊಠಡಿಯೊಳಗೆ ಹಾವು ಇರುವುದನ್ನು ಗಮನಿಸಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಕ್ಷಣವೇ ಎಚ್ಚೆತ್ತುಕೊಂಡು ಸುರಕ್ಷಿತವಾಗಿ ದೂರ ಸರಿದಿದ್ದಾರೆ. ಯಾವುದೇ ಅನಾಹುತ ಸಂಭವಿಸದಂತೆ ತಡಮಾಡದೆ ಸ್ಥಳೀಯ ಉರಗ ರಕ್ಷಕರಾದ ರಮೇಶ್ ಮಾಳಿ ಅವರಿಗೆ ತಕ್ಷಣ ಮಾಹಿತಿ ಮುಟ್ಟಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಉರಗ ತಜ್ಞ ರಮೇಶ್ ಮಾಳಿ ಅವರು, ಅತ್ಯಂತ ಚಾಕಚಕ್ಯತೆಯಿಂದ ಹಾವಿಗೆ ಯಾವುದೇ ರೀತಿಯ ಹಾನಿಯಾಗದಂತೆ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾವು ಹಿಡಿದ ನಂತರವಷ್ಟೇ ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
6 ಅಡಿ ಉದ್ದದ ಬೃಹತ್ ಹಾವನ್ನು ರಮೇಶ್ ಮಾಳಿ ಅವರು ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ ಹತ್ತಿರದ ನದಿಯ ಜಲಮೂಲ ಹಾಗೂ ಪ್ರಕೃತಿಯ ಮಡಿಲಿಗೆ ಮುಕ್ತವಾಗಿ ಬಿಟ್ಟಿದ್ದಾರೆ.
ಸಕಾಲದಲ್ಲಿ ಸ್ಪಂದಿಸಿ ಧೈರ್ಯದಿಂದ ಹಾವನ್ನು ರಕ್ಷಿಸಿದ ಉರಗ ತಜ್ಞ ರಮೇಶ್ ಮಾಳಿ ಅವರ ತ್ವರಿತ ಕಾರ್ಯಕ್ಕೆ ಶಾಲಾ ಮಂಡಳಿ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತೀವ್ರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
PublicNext
17/06/2026 08:30 am
LOADING...