ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ನನ್ನ ಹೃದಯ ಬಿಜೆಪಿಯಲ್ಲಿದೆ, ದೇಹ ಮಾತ್ರ ಹೊರಗಿದೆ - ಕೆ.ಎಸ್​ ಈಶ್ವರಪ್ಪ

ಶಿವಮೊಗ್ಗ : ನನ್ನ ಹೃದಯ ಯಾವಾಗಲೂ ಬಿಜೆಪಿಯಲ್ಲೇ ಇರುತ್ತದೆ, ಆದರೆ ದೇಹ ಮಾತ್ರ ಸದ್ಯಕ್ಕೆ ಹೊರಗಿದೆ ಎಂದು ಹೇಳುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ತಾವು ಮತ್ತೆ ಬಿಜೆಪಿಗೆ ಮರಳುವ ಕುರಿತಾದ ಚರ್ಚೆಯನ್ನು ಮುನ್ನೆಲೆಗೆ ತಂದಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನನ್ನ ಹೃದಯ ಬಿಜೆಪಿಗೆ ಮೀಸಲು. ನನ್ನ ದೇಹ ಮಾತ್ರ ಹೊರಗಿದೆಯೇ ಹೊರತು, ಮನಸ್ಸು ಪೂರ್ತಿಯಾಗಿ ಬಿಜೆಪಿಯಲ್ಲೇ ಇದೆ.

ಆದರೆ ಪ್ರಸ್ತುತ ಬಿಜೆಪಿಯಲ್ಲಿ ಅನೇಕ ಸಮಸ್ಯೆಗಳಿದ್ದು, ಇದನ್ನು ನಾನು ಬಹಳ ಬೇಸರದಿಂದ ಹೇಳುತ್ತಿದ್ದೇನೆ. ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ನಾವು 25 ಸ್ಥಾನಗಳನ್ನು ಗೆದ್ದಿದ್ದೆವು, ಆದರೆ ನಂತರದ ದಿನಗಳಲ್ಲಿ ಆ ಸಂಖ್ಯೆ 17ಕ್ಕೆ ಇಳಿಯಿತು. ರಾಜ್ಯದ ಜನರು ಪಕ್ಷದ ಸಿದ್ಧಾಂತವನ್ನು ನೋಡಿ ಮತ ಹಾಕುತ್ತಾರೆ ಎಂದರು.

ಸದ್ಯ ರಾಜ್ಯ ಬಿಜೆಪಿಯಲ್ಲಿ ಸಂಘಟನೆ ಸರಿಯಾಗಿಲ್ಲ. ಪಕ್ಷದಲ್ಲಿ ಎಲ್ಲವೂ ಸರಿಯಾದ ಬಳಿಕ, ಹಿರಿಯರೊಂದಿಗೆ ಚರ್ಚಿಸಿ ನಾನು ಮತ್ತೆ ಬಿಜೆಪಿಗೆ ಸೇರುತ್ತೇನೆ ಎಂದು ಸ್ಪಷ್ಟಪಡಿಸಿದರು.

Edited By :
PublicNext

PublicNext

17/06/2026 06:57 pm

Cinque Terre

8.91 K

Cinque Terre

0

ಸಂಬಂಧಿತ ಸುದ್ದಿ