ಉಡುಪಿ: ಮಲ್ಪೆ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನಕ್ಕೊಳಗಾಗಿದ್ದಾನೆ. ಬಂಧಿತನನ್ನು ಮಧು @ ಉಮೇಶ್ , ಬಿಡಗನಹಳ್ಳಿ ಗ್ರಾಮ, ಕಸಬಾ ಹೋಬಳಿ, ಚನ್ನರಾಯಪಟ್ಟಣ ತಾಲೂಕು, ಹಾಸನ ಜಿಲ್ಲೆ ನಿವಾಸಿ ಎಂದು ಗುರುತಿಸಲಾಗಿದೆ.
ಮಲ್ಪೆ ಪೊಲೀಸ್ ಠಾಣೆಯ ವಾರಂಟ್ ಸಿಬ್ಬಂದಿಗಳಾದ ವಿಶ್ವನಾಥ್ ಹೆಚ್. ಹಾಗೂ ಮಹಮ್ಮದ್ ರಫಿ ಅವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತಂದರು. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ಜೂನ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಬಳಿಕ ಹಿರಿಯಡ್ಕ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.
Kshetra Samachara
18/06/2026 06:12 pm
LOADING...