ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಜಾಮೀಯಾ ಮಸೀದಿಯಲ್ಲಿ ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ಸಿಗಲಿ ಅಂತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಹೊಸಪೇಟೆ ನಗರದ ಜಾಮೀಯಾ ಮಸ್ಜೀದ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಕೆ ಬಳಿಕ ಮಾತನಾಡಿದ ವಕ್ಫ್ ಬೋರ್ಡ್ ಜಿಲ್ಲಾಧ್ಯಕ್ಷ ದಾದಾಪೀರ್, ಜಮೀರ್ ಅಹ್ಮದ್ ಕೇವಲ ಮುಸ್ಲಿಂ ಸಮಾಜದ ನಾಯಕ ಅಲ್ಲ. ಅವರು ಒಬ್ಬ ಅಹಿಂದ ವರ್ಗದ ಜನ. ಅವರಿಗೆ ಮಂತ್ರಿಸ್ಥಾನ ಕೊಡಲೇಬೇಕು ಅಂತ ಸಿಎಂ ಡಿಕೆ ಶಿವಕುಮಾರ್ ಗೆ, ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದರು. ಮಧ್ಯಾಹ್ನದ ವೇಳೆ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಸ್ಲಿಂ ಸಮುದಾಯದ ನೂರಾರು ಜನರು ಭಾಗಿ ಆಗಿದ್ದರು.
PublicNext
19/06/2026 07:50 pm
LOADING...