ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹಲವು ವರ್ಷಗಳಿಂದ ಅನಾಥವಾಗಿ ಬಿದ್ದಿರುವ ಅಂಚೆ ಪೆಟ್ಟಿಗೆ : ಸಾರ್ವಜನಿಕರ ಆಕ್ರೋಶ

ಉಡುಪಿ: ಉಡುಪಿ ನಗರದ ಕಿನ್ನಿಮೂಲ್ಕಿ ಅಗ್ನಿಶಾಮಕ ದಳ ರಸ್ತೆಯಲ್ಲಿ ಹಲವು ವರ್ಷಗಳಿಂದ ಅನಾಥವಾಗಿ ಬಿದ್ದಿರುವ ಅಂಚೆ ಪೆಟ್ಟಿಗೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಾರ್ವಜನಿಕರ ಸೇವೆಗಾಗಿ ಅಳವಡಿಸಲಾಗಿದ್ದ ಅಂಚೆ ಪೆಟ್ಟಿಗೆ ಮುರಿದು ರಸ್ತೆಯ ಪಕ್ಕದಲ್ಲಿ ಬಿದ್ದಿದ್ದರೂ ಸಂಬಂಧಪಟ್ಟ ಇಲಾಖೆಗಳು ಗಮನ ಹರಿಸದಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉಡುಪಿ ನಗರದ ಕಿನ್ನಿಮೂಲ್ಕಿ ಅಗ್ನಿಶಾಮಕ ದಳ ರಸ್ತೆಯ ಪಕ್ಕದಲ್ಲಿ ಹಲವು ವರ್ಷಗಳಿಂದ ಅಂಚೆ ಪೆಟ್ಟಿಗೆಯೊಂದು ಅನಾಥವಾಗಿ ಬಿದ್ದಿದೆ.

ಸಾರ್ವಜನಿಕರು ಪತ್ರಗಳನ್ನು ರವಾನಿಸಲು ಬಳಸುತ್ತಿದ್ದ ಈ ಅಂಚೆ ಪೆಟ್ಟಿಗೆ ಇದೀಗ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಂತಾಗಿದೆ.

ಮುರಿದು ಹಾಳಾಗಿರುವ ಅಂಚೆ ಪೆಟ್ಟಿಗೆ ರಸ್ತೆ ಬದಿಯಲ್ಲೇ ಬಿದ್ದಿದ್ದು, ಇದರಿಂದ ಸ್ಥಳದ ಅಂದವೂ ಹಾಳಾಗುತ್ತಿದೆ. ಅಷ್ಟೇ ಅಲ್ಲದೆ ಪಾದಚಾರಿಗಳ ಸಂಚಾರಕ್ಕೂ ಕೆಲವೊಮ್ಮೆ ತೊಂದರೆ ಉಂಟಾಗುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಅಂಚೆ ಇಲಾಖೆಯಾಗಲಿ ಅಥವಾ ನಗರಸಭೆಯಾಗಲಿ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಹಲವು ವರ್ಷಗಳಿಂದ ಇದೇ ಸ್ಥಿತಿಯಲ್ಲಿರುವ ಅಂಚೆ ಪೆಟ್ಟಿಗೆಯನ್ನು ತೆರವುಗೊಳಿಸುವುದಾಗಲಿ, ದುರಸ್ತಿ ಮಾಡಿ ಮರುಸ್ಥಾಪಿಸುವುದಾಗಲಿ ಮಾಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಸಾರ್ವಜನಿಕರ ಉಪಯೋಗಕ್ಕಾಗಿ ಅಳವಡಿಸಲಾದ ಸೌಲಭ್ಯಗಳು ಈ ರೀತಿಯಾಗಿ ನಿರ್ಲಕ್ಷ್ಯಕ್ಕೆ ಒಳಗಾಗಿರುವುದು ಇಲಾಖೆಗಳ ಕಾರ್ಯವೈಖರಿಯ ಮೇಲೆಯೇ ಪ್ರಶ್ನೆ ಎತ್ತುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

Edited By :
PublicNext

PublicNext

20/06/2026 04:26 pm

Cinque Terre

6.51 K

Cinque Terre

0

ಸಂಬಂಧಿತ ಸುದ್ದಿ