ಜಿಲ್ಲೆಯ ರೈತರಲ್ಲಿ ಬೆಳೆ ವಿಮೆ ಯೋಜನೆ ಕುರಿತು ವ್ಯಾಪಕ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳೆ ವಿಮೆ ಜಾಗೃತಿ ವಾಹನಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ನೊಂದಣಿಗೆ ಈ ವರ್ಷ ಜುಲೈ 31 ಕೊನೆಯ ದಿನಾಂಕ ನಿಗದಿಯಾಗಿದೆ. ಅದಕ್ಕೆ ಎಸ್ ಬಿ ಐ ಬ್ಯಾಂಕಿನ ಇನ್ಶೂರೆನ್ಸ್ ಕಂಪನಿಯವರು ರೈತರಿಗೆ ಮಾಹಿತಿ ತಲುಪಿಸುವ ಉದ್ದೇಶದಿಂದ ಎರಡು ಸಂಚಾರಿ ವಾಹನಕ್ಕೆ ಚಾಲನೆಯನ್ನು ಕೊಟ್ಟಿದ್ದಾರೆ. ಎಲ್ಲಾ ರೈತರಲ್ಲಿ ಸದುಪಯೋಗ ಪಡೆಸಿಕೊಳ್ಳುವಂತೆ ವಿನಂತಿಸಿದರು.
ಇನ್ನೂ ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಪವಾರ ಮಾತನಾಡಿ ಈ ಪ್ರಸಕ್ತ ಸಾಲಿನಲ್ಲಿ ವಿಜಯಪುರ ಜಿಲ್ಲೆಗೆ ಈ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನ ಮಾಡ್ತಾ ಇದ್ದೇವೆ. ಆ ನಿಟ್ಟಿನಲ್ಲಿ ವಿಜಯಪುರ ಜಿಲ್ಲೆಯಲ್ಲಿ ಹತ್ತಿ, ತೊಗರಿ ಮತ್ತೆ ಇತರೆ ಬೆಳೆಗಳು ರೈತರು ಬೆಳೆದಿದ್ದಾರೆ. ಮತ್ತೆ ಮಳೆಯ ಅಭಾವ ಮತ್ತು ಆ ಬರ ಪೀಡಿತ ಹಿನ್ನೆಲೆಯಲ್ಲಿ ಮಳೆ ಕೊರತೆ ಇರುವುದರಿಂದ ರೈತರಿಗೆ ಬೆಳೆ ವಿಮೆ ಉಪಯೋಗವಾಗುತ್ತದೆ ಎಂದರು.
ಇನ್ನೂ ಈ ಸಂದರ್ಭದಲ್ಲಿ ಕೃಷಿ ತಾಂತ್ರಿಕ ಅಧಿಕಾರಿ ರಾಜೇಂದ್ರಗೌಡ ಪಾಟೀಲ ಹಾಗೂ ವಿಮಾ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.
PublicNext
22/07/2026 05:50 pm
LOADING...