ಯಾದಗಿರಿ: ಅವೈಜ್ಞಾನಿಕ ರಸ್ತೆ ತಿರುವಿನಿಂದಾಗಿ ನಿತ್ಯ ಅಪಘಾತ ಸಂಭವಿಸಿ ಸಾವು ನೋವು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆಯುತ್ತಿವೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಧರ್ಮಪುರ ಹಾಗೂ ಬೋರಬಂಡಾ ಮಧ್ಯದಲ್ಲಿರುವ ರಸ್ತೆಯು ವಾಹನ ಸವಾರರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ.
ಯಾದಗಿರಿ ಹಾಗೂ ಗುರುಮಠಕಲ್ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಕೂಡಲೇ ರಾಜ್ಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಇತ್ತ ಗಮನ ಹರಿಸಿ, ಅವೈಜ್ಞಾನಿಕ ರಸ್ತೆ ಸುಧಾರಣೆಗೆ ಮುಂದಾಗುವಂತೆ ವಾಹನ ಸವಾರರು ಆಗ್ರಹಿಸಿದ್ದಾರೆ.
PublicNext
23/07/2026 10:14 pm
LOADING...