ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗದಲ್ಲಿ 'ಮಹಿಳಾ ಸ್ಪಂದನ' ಕಾರ್ಯಕ್ರಮ: ಮಹಿಳೆಯರ ಅಹವಾಲು ಆಲಿಸಲಿರುವ ಡಾ. ನಾಗಲಕ್ಷ್ಮೀ ಚೌಧರಿ

ಗದಗ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಇದೇ ಜುಲೈ 31 ಹಾಗೂ ಆಗಸ್ಟ್ 1 ರಂದು ಗದಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜುಲೈ 31 ರಂದು ಗದಗ ನಗರದ ಮೆಡಿಕಲ್ ಕಾಲೇಜು ಸೇರಿದಂತೆ ರೋಣ ತಾಲೂಕಿನ ವಿವಿಧೆಡೆ ಭೇಟಿ ನೀಡಲಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮಹಿಳಾ ಘಟಕವನ್ನು ಅವರು ಉದ್ಘಾಟಿಸಲಿದ್ದು, ಆಗಸ್ಟ್ 1 ನೇ ತಾರೀಖು ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಮಹಿಳೆಯರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ಮಹಿಳಾ ಸ್ಪಂದನ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Edited By : Manjunath H D
PublicNext

PublicNext

29/07/2026 03:37 pm

Cinque Terre

8.28 K

Cinque Terre

1

ಸಂಬಂಧಿತ ಸುದ್ದಿ