ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ : ಸರ್ಕಾರಕ್ಕೆ ಆರ್. ಅಶೋಕ್ ಆಗ್ರಹ

ಚಿತ್ರದುರ್ಗ: ಮೇಟಿಕುರ್ಕೆ ಬಳಿ ವಿಪಕ್ಷ ನಾಯಕ ಆರ್. ಅಶೋಕ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, "ಚಿತ್ರದುರ್ಗ ಜಿಲ್ಲೆ ಶಾಶ್ವತ ಬರಪೀಡಿತ ಜಿಲ್ಲೆ. 3 ಲಕ್ಷಕ್ಕೂ ಅಧಿಕ ಹೆಕ್ಟೇರ್ ಬಿತ್ತನೆ ಮಾಡುವ ಜಿಲ್ಲೆಯಲ್ಲಿ ಪ್ರಸ್ತುತ 19% ಮಾತ್ರ ಬಿತ್ತನೆಯಾಗಿದೆ. ಜಿಲ್ಲೆಯಲ್ಲಿ ರೈತರು ಮಳೆಯಿಲ್ಲದೆ ಕಂಗಾಲಾಗಿದ್ದಾರೆ. ಅಧಿಕಾರಿಗಳಾಗಲಿ, ಸರ್ಕಾರವಾಗಲಿ ರೈತರ ಕಡೆ ತಿರುಗಿಯೂ ನೋಡಿಲ್ಲ. ಇನ್ಶೂರೆನ್ಸ್ (ವಿಮೆ) ಕುರಿತು ಸರಿಯಾದ ಪ್ರಚಾರ ಕೂಡ ಮಾಡಿಲ್ಲ. ಕೂಡಲೇ ರಾಜ್ಯ ಸರ್ಕಾರ ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು" ಎಂದು ಒತ್ತಾಯಿಸಿದರು.

Edited By : Manjunath H D
PublicNext

PublicNext

29/07/2026 03:50 pm

Cinque Terre

7.14 K

Cinque Terre

0

ಸಂಬಂಧಿತ ಸುದ್ದಿ