ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಮಾಜಿ ಸಚಿವ ಸಿ. ಬೈರೇಗೌಡರ ಪುಣ್ಯಸ್ಮರಣೆ: ಸಮಾಧಿಗೆ ಶಾಸಕ ಕೊತ್ತೂರು ಜಿ. ಮಂಜುನಾಥ್ ನಮನ

ಕೋಲಾರ: ಮಾಜಿ ಸಚಿವ ದಿವಂಗತ ಸಿ. ಬೈರೇಗೌಡ ಅವರ ಪುಣ್ಯಸ್ಮರಣೆಯ ಅಂಗವಾಗಿ ಗರುಡಪಾಳ್ಯದಲ್ಲಿರುವ ಅವರ ಸಮಾಧಿಗೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಮತ್ತು ಎಂಎಲ್‌ಸಿ ಎಂ. ಎಲ್. ಅನಿಲ್ ಕುಮಾರ್ ಅವರು ಭೇಟಿ ನೀಡಿ, ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಂಜುನಾಥ್, "ಸಿ. ಬೈರೇಗೌಡ ಅವರು ಜನಪರ ನಾಯಕತ್ವ, ಸರಳತೆ ಹಾಗೂ ಅಭಿವೃದ್ಧಿಪರ ಚಿಂತನೆಯ ಮೂಲಕ ಜನಮನದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದರು. ಅವರ ಆದರ್ಶಗಳು ಇಂದಿನ ಜನಪ್ರತಿನಿಧಿಗಳಿಗೆ ಮಾರ್ಗದರ್ಶಕವಾಗಿವೆ. ಅವರು ಹಾಕಿಕೊಟ್ಟ ಅಭಿವೃದ್ಧಿಯ ಹಾದಿಯಲ್ಲಿ ಸಾಗುವುದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ" ಎಂದರು.

Edited By : PublicNext Desk
Kshetra Samachara

Kshetra Samachara

29/07/2026 04:44 pm

Cinque Terre

740

Cinque Terre

0

ಸಂಬಂಧಿತ ಸುದ್ದಿ