ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದ ಹೊರವಲಯದಲ್ಲಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ಯುವಕ ಶಹಾಪುರ ತಾಲೂಕಿನ ಚಾಮನಾಳ ಗ್ರಾಮದವನು ಎಂದು ತಿಳಿದು ಬಂದಿದೆ. ಬೈಕ್ನಲ್ಲಿ ಹೊರಟಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸುರಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವರದಿ: ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ
PublicNext
01/08/2026 07:05 pm
LOADING...