ಬ್ರಹ್ಮಾವರ : ಉಡುಪಿ ಜಿಲ್ಲಾ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ವತಿಯಿಂದ ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ವಿಶೇಷ ಸಭೆಯು ಶನಿವಾರ ಜರುಗಿತು. ಸಂಘದ ಅಧ್ಯಕ್ಷ ರವಿಚಂದ್ರ ಆಚಾರ್ಯ ಮಾರಾಳಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ಸುಜ್ಞಾನ ಮೂರ್ತಿ, "1967ರಲ್ಲಿ ಚಿನ್ನ ನಿಯಂತ್ರಣ ಕಾಯ್ದೆ ಜಾರಿಗೆ ಬಂದಾಗ ದೇಶದಾದ್ಯಂತ ಚಿನ್ನ-ಬೆಳ್ಳಿ ಕೆಲಸಗಾರರ ಮಕ್ಕಳಿಗೆ ಸರ್ಕಾರಿ ಉದ್ಯೋಗ ನೀಡಲಾಗಿತ್ತು. ಆದರೆ, ಇಂದಿನ ಪ್ರಧಾನಿಯವರು 'ಒಂದು ವರ್ಷ ಚಿನ್ನ ಖರೀದಿಸಬೇಡಿ' ಎಂದು ದೇಶದ ಜನತೆಗೆ ಕರೆ ಕೊಟ್ಟಿದ್ದರ ಪರಿಣಾಮವಾಗಿ, ಕೆಲಸಗಾರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಕುರಿತು ತುರ್ತು ಗಮನ ಹರಿಸಬೇಕು" ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಸಂಘದ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಅಲ್ಲದೆ, ಇದೇ ವರ್ಷದ ಅಂತ್ಯದಲ್ಲಿ ಉಡುಪಿಯಲ್ಲಿ ನಡೆಯಲಿರುವ ಸಂಘದ ರಜತ ಮಹೋತ್ಸವ ಆಚರಣೆಯ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಸಂಘದ ಕಾನೂನು ಸಲಹೆಗಾರರಾದ ಗಂಗಾಧರ ಎಚ್., ಗೌರವಾಧ್ಯಕ್ಷರಾದ ಬಾಲಕೃಷ್ಣ ಕಪ್ಪೆಟ್ಟು ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು
PublicNext
02/08/2026 10:23 pm
LOADING...