ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಲಕ್ಷ್ಮಣ್ ಸವದಿಯವರಿಗೆ ಸಚಿವ ಸ್ಥಾನ ಪ್ರಕಟಗೊಂಡ ಬೆನ್ನಲ್ಲೇ ಸವದಿ ಪುತ್ರ ಟೆಂಪಲ್ ರನ್ ಮಾಡಿದ್ದಾರೆ.
ತಂದೆಗೆ ಸಚಿವ ಸ್ಥಾನ ಸಿಕ್ಕ ಬೆನ್ನಲ್ಲೇ ಶಶಿಕಾಂತ್ ಸವದಿಯವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದಾರೆ. ಈ ವೇಳೆ ಅವರು ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉಡುಪಿಗೆ ಕಾರ್ಯ ನಿಮಿತ್ತವಾಗಿ ಬಂದಿದ್ದ ಅವರು, ಸಚಿವ ಸಂಪುಟದಲ್ಲಿ ತಂದೆಗೆ ಸಚಿವ ಸ್ಥಾನ ದೊರಕಿದ ಸಂತೋಷದಲ್ಲಿ ಕಟೀಲು ಕ್ಷೇತ್ರಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
PublicNext
03/08/2026 06:29 pm
LOADING...