ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಭಾರೀ ಮಳೆಯ ಪರಿಣಾಮ ರೆಂಜಾಳದಲ್ಲಿ ಭೂಕುಸಿತದ ಆತಂಕ

ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವು ಪ್ರದೇಶಗಳಲ್ಲಿ ಭೂಕುಸಿತದ ಆತಂಕ ಎದುರಾಗಿದೆ.

ರೆಂಜಾಳ ಗ್ರಾಮದ ಹೆಡ್ಮೆ ಹರಿಪ್ರಸಾದ್ ಎಂಬುವರ ಮನೆಯ ಸಮೀಪ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪ್ರದೀಪ್ ಆರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರನ್ನು ಪಕ್ಕದಲ್ಲಿರುವ ಸರಕಾರಿ ಶಾಲೆಯಲ್ಲಿ ಉಳಿಯುವಂತೆ ತಿಳಿಸಿದ್ದಾರೆ.

ಶಾಲೆಯಲ್ಲಿ ಉಳಿದುಕೊಳ್ಳಲು ಮೂಲ ಸೌಕರ್ಯದ ಕೊರತೆ ಇದೆ ಹಾಗೂ ಸಂತ್ರಸ್ತರಲ್ಲಿ ಹೆಂಗಸರು,ಹಾಗೂ ವೃದ್ಧರು ಇದ್ದು ಎಲ್ಲಿ ಉಳಿಯುವುದು ಎಂಬ ಪ್ರಶ್ನೆ ಎದುರಾಗಿದೆ…

ಮಂಜು ಶೆಟ್ಟಿ ಸಾಣೂರು, ಪಬ್ಲಿಕ್ ನೆಕ್ಸ್ಟ್, ಕಾರ್ಕಳ

Edited By :
PublicNext

PublicNext

04/08/2026 07:35 pm

Cinque Terre

11.63 K

Cinque Terre

0

ಸಂಬಂಧಿತ ಸುದ್ದಿ