ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲ ಕರಿಯ ಉಗ್ಗೆದ ಬೆಟ್ಟು ಪರಿಸರದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಹಲವಾರು ಮನೆಯ ನಾಯಿಗಳು ಕೋಳಿಗಳು ಚಿರತೆಗೆ ಬಲಿಯಾಗಿವೆ. ರಾತ್ರಿ ಹೊತ್ತು ಚಿರತೆ ಮನೆ ಅಂಗಳದಲ್ಲಿ ಸುತ್ತಾಡುವ ದೃಶ್ಯ ನವನೀತ ಅಮೀನ್ ರವರ ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆಯ ಹಾವಳಿಯಿಂದ ಜನರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಬೋನು ಇಟ್ಟು ಚಿರತೆಯನ್ನು ಹಿಡಿಯಬೇಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
PublicNext
04/08/2026 10:33 pm
LOADING...