ಕಲಬುರಗಿ: ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಡಿಕೆ ಶಿವಕುಮಾರ್ ಅವರ ಮಂತ್ರಿಮಂಡಲದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತು ಕೆಲವರು ‘ಪೇಮೆಂಟ್ ಸೀಟ್’ ಎಂದು ಹೇಳುತ್ತಿದ್ದಾರೆ. ಹೆಸರು ಬದಲಾವಣೆಗಳು ನಡೆಯುತ್ತಿರುವುದನ್ನು ನೋಡಿದರೆ ಜನರಲ್ಲಿ ಈ ರೀತಿಯ ಮಾತುಗಳು ಕೇಳಿಬರುತ್ತಿವೆ” ಎಂದು ಹೇಳಿದರು.
ಇದೇ ವೇಳೆ, ಸಚಿವ ಸಂಪುಟ ರಚನೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವಾಗಿದ್ದು, ಅದು ಅವರ ಆಂತರಿಕ ವಿಚಾರ ಎಂದು ಪ್ರತಿಕ್ರಿಯಿಸಿದರು.
PublicNext
05/08/2026 10:02 am
LOADING...