ಕುಶಾಲನಗರ: ರಾಜ್ಯದ ನೂತನ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ, ಸಚಿವರಾದ ಬಳಿಕ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಆಗಮಿಸಿ, ಕುಶಾಲನಗರ ಸಮೀಪದ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿದರು.
ಜಲಾಶಯದಲ್ಲಿನ ನೀರಿನ ಸಂಗ್ರಹ, ಒಳಹರಿವು ಹಾಗೂ ನೀರಿನ ನಿರ್ವಹಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಕುಡಿಯುವ ನೀರಿಗೆ ಆದ್ಯತೆ ಹಾಗೂ ಕೃಷಿ ಬಳಕೆಯ ಉದ್ದೇಶದಿಂದ ಜಲಾಶಯದ ಪರಿಸ್ಥಿತಿಯನ್ನು ಅವಲೋಕಿಸಿದರು.
ಈ ವೇಳೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಸಚಿವರೊಂದಿಗೆ ಉಪಸ್ಥಿತರಿದ್ದು, ಜಲಾಶಯದ ಮಾಹಿತಿ ನೀಡುವುದರ ಜೊತೆಗೆ ಜನರ ಅಗತ್ಯಗಳ ಬಗ್ಗೆಯೂ ಸಚಿವರ ಗಮನ ಸೆಳೆದರು.
PublicNext
05/08/2026 04:57 pm
LOADING...