ಖಾನಾಪುರ: ತಾಲೂಕಿನ ಪಾರಿಶ್ವಾಡ್ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬೆಳಿಗ್ಗೆ 9:20ಕ್ಕೆ ಪಾರಿಶ್ವಾಡ್ನಿಂದ ಬಸ್ ಸಂಚರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಇಲ್ಲದ ಕಾರಣ ಶಾಲೆ-ಕಾಲೇಜುಗಳಿಗೆ ತಲುಪಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದರು. ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
– ಬಾಳೇಶ ಚವ್ವನ್ನವರ
ಪಬ್ಲಿಕ್ ನೆಕ್ಸ್ಟ್, ಖಾನಾಪುರ
PublicNext
05/08/2026 10:56 pm
LOADING...