ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಕಿನಲ್ಲಿ ಬಂದು ಚಿನ್ನದ ಸರ ಎಗರಿಸಿದ ಖದೀಮರು

ಶಿವಮೊಗ್ಗ : ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಶಿವಮೊಗ್ಗ ನಗರದ ಜಯದೇವ ಬಡಾವಣೆಯಲ್ಲಿ ವೃದ್ಧೆಯೊಬ್ಬರ ಕೊರಳಿನಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಹೆಚ್.ಎಸ್. ಜಯಶ್ರೀ (76) ಎಂಬುವವರು ಚಿನ್ನದ ಸರ ಕಳೆದುಕೊಂಡವರು. ಜಯಶ್ರೀ ಅವರು ತಮ್ಮ ಮನೆಯ ಮುಂದಿನ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ನೀಲಿ ಮತ್ತು ಹಳದಿ ಬಣ್ಣದ ರೈನ್‌ಕೋಟ್ ಧರಿಸಿದ್ದ ಇಬ್ಬರು ಬಂದು ಜಯಶ್ರೀ ಅವರನ್ನು ಹಾದು ಮುಂದೆ ಸಾಗಿದ್ದರು. ಸ್ವಲ್ಪ ಹೊತ್ತಿನ ನಂತರ ಮತ್ತೆ ಅದೇ ಬೈಕ್‌ನಲ್ಲಿ ವಾಪಸ್ ಬಂದ ದುಷ್ಕರ್ಮಿಗಳು ವೃದ್ಧೆಯ ಮುಂದೆ ಬೈಕ್ ನಿಲ್ಲಿಸಿದ್ದರು ಎಂದು ಆರೋಪಿಸಲಾಗಿದೆ.

ಒಬ್ಬಾತ ಬೈಕ್‌ನಿಂದ ಕೆಳಗಿಳಿದು ಜಯಶ್ರೀ ಅವರ ಬಳಿಗೆ ಬಂದು, ಕೊರಳಲ್ಲಿದ್ದ ಎರಡು ಎಳೆಯ ಬಂಗಾರದ ಮಾಂಗಲ್ಯ ಸರಕ್ಕೆ ಕೈಹಾಕಿ ಕಿತ್ತುಕೊಂಡಿದ್ದಾನೆ. ಈ ಸಂದರ್ಭದಲ್ಲಿ ಜಯಶ್ರೀ ಅವರನ್ನು ತಳ್ಳಿ, ಬೈಕ್‌ನಲ್ಲಿ ಕಾಯುತ್ತಿದ್ದ ಮತ್ತೊಬ್ಬ ಆರೋಪಿಯೊಂದಿಗೆ ಪರಾರಿಯಾಗಿದ್ದಾನೆ.

ಕಳುವಾದ 60 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರದ ಅಂದಾಜು ಮೌಲ್ಯ ₹7,20,000 ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಿನೋಬನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Edited By : PublicNext Desk
PublicNext

PublicNext

06/08/2026 09:33 am

Cinque Terre

3.77 K

Cinque Terre

0

ಸಂಬಂಧಿತ ಸುದ್ದಿ