ದಾವಣಗೆರೆ: ರಾಜ್ಯ ಸರ್ಕಾರವು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ನಡೆಸಿದ್ದು, ಹಿರಿಯ ಐಪಿಎಸ್ ಅಧಿಕಾರಿ ಎಸ್. ಸತೀಶ್ ಕುಮಾರ್ ಅವರನ್ನು ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ (IGP) ನಿಯೋಜಿಸಿ ವರ್ಗಾವಣೆ ಆದೇಶ ಹೊರಡಿಸಿದೆ.
ಎಸ್. ಸತೀಶ್ ಕುಮಾರ್ ಅವರು ಈ ಹಿಂದೆ ಹಲವು ಪ್ರಮುಖ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದು, ಇದೀಗ ದಾವಣಗೆರೆ ಕೇಂದ್ರಸ್ಥಾನ ಹೊಂದಿರುವ ಪೂರ್ವ ವಲಯದ ಐಜಿಪಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
PublicNext
11/09/2026 10:09 pm
LOADING...