ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಡಕೆ ಅಂಡೆಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಶಿವಮೊಗ್ಗ : ಅಡಕೆ ಬೇಯಿಸುವ ಅಂಡೆಗೆ ಕಾಲು ಜಾರಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಒಡ್ಡಿನಕೊಪ್ಪ ನಿವಾಸಿ ಜೇನು ಕುಮಾರ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸೆಪ್ಟೆಂಬರ್ 8ರಂದು ಅಡಕೆ ಶೆಡ್‌ನಲ್ಲಿ ಅಂಡೆಯ ಹಾಲು ತೆಗೆಯುವ ಸಮಯದಲ್ಲಿ ಜೇನು ಕುಮಾರ್ ಅವರ ಕಾಲು ಜಾರಿ, ಕುದಿಯುತ್ತಿದ್ದ ಅಡಕೆ ಅಂಡೆಗೆ ಬಿದ್ದಿದ್ದರು. ಈ ಭೀಕರ ದೃಶ್ಯ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಂಡೆಗೆ ಬಿದ್ದ ಪರಿಣಾಮ ದೇಹದ ಬಹುತೇಕ ಭಾಗ ತೀವ್ರವಾಗಿ ಸುಟ್ಟು ಹೋಗಿತ್ತು. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Edited By :
PublicNext

PublicNext

17/09/2026 04:41 pm

Cinque Terre

7.35 K

Cinque Terre

0

ಸಂಬಂಧಿತ ಸುದ್ದಿ