ಚಾಮರಾಜನಗರ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿರುವ ಘಟನೆ ಹನೂರು ತಾಲೂಕಿನ ಹಾವಿನಮೂಲೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವಮ್ಮ ಮತ್ತು ಮಾದಪ್ಪ ಅವರ ಮನೆಯ ಗೋಡೆ ಮಳೆಯಿಂದಾಗಿ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮನೆಯ ಗೋಡೆ ಕುಸಿದಿರುವ ಪರಿಣಾಮ ಮನೆಯಲ್ಲಿ ವಾಸಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.
ಸಂಬಂಧಪಟ್ಟವರು ಇತ್ತ ಗಮನಹರಿಸಿ, ಕುಟುಂಬಕ್ಕೆ ಸರ್ಕಾರದಿಂದ ಮನೆ ನಿರ್ಮಿಸಿಕೊಡಲು ಕ್ರಮವಹಿಸಬೇಕು ಎಂದು ಮನೆ ಮಾಲೀಕರು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.
Kshetra Samachara
18/09/2026 04:13 pm
LOADING...