ಹುಕ್ಕೇರಿ: ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀ ದೇವಿಯ ವಾರದ ಜಾತ್ರಾ ಮಹೋತ್ಸವದ ಅಂಗವಾಗಿ ಸಾಮೂಹಿಕ ಲಿಂಗಪೂಜೆ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.
ಪ್ರತಿವರ್ಷದಂತೆ ಈ ವರ್ಷವೂ ನಡೆದ ಧಾರ್ಮಿಕ ಕಾರ್ಯಕ್ರಮವು ಚಿಂಚಣಿ ಅಲ್ಲಮಪ್ರಭು ಸಿದ್ದಸಂಸ್ಥಾನ ಮಠದ ಶಿವಪ್ರಸಾದ್ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಮಹಾಲಕ್ಷ್ಮೀ ದೇವಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಸಾಮೂಹಿಕ ಲಿಂಗಪೂಜೆ ನೆರವೇರಿಸಲಾಯಿತು.
ಸುಮಾರು 500ಕ್ಕೂ ಅಧಿಕ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲಿಂಗಪೂಜೆ ನೆರವೇರಿಸಿದರು. ಗ್ರಾಮದ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಶ್ರದ್ಧಾ-ಭಕ್ತಿಯಿಂದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಸಾಮೂಹಿಕ ಲಿಂಗಪೂಜೆ ಕಾರ್ಯಕ್ರಮವು ಭಕ್ತರಲ್ಲಿ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಭಾವನೆ ಮೂಡಿಸಿತು.
PublicNext
18/09/2026 08:31 pm
LOADING...