ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ಗಬ್ಬೂರಿನ ಬಳಿ ನಿರ್ಮಾಣಗೊಂಡ ಕೆಎಲ್ಇ ಆಸ್ಪತ್ರೆ ಹಾಗೂ ಕಾಲೇಜಿನ ಲೋಕಾರ್ಪಣೆ ಕೇಂದ್ರ ಸಚಿವ ಅಮಿತ್ ಶಾ ಅವರ ಅನುಪಸ್ಥಿತಿಯಲ್ಲಿ ನೆರವೇರಿತು.
ಕೇಂದ್ರ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಕೆಎಲ್ಇ ಮೆಡಿಕಲ್ ಕಾಲೇಜು ಉದ್ಘಾಟನೆಯಿಂದ ದೂರ ಉಳಿದಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ತಂಗಿರುವ ಅಮಿತ್ ಶಾ ಅವರ ಅನುಪಸ್ಥಿತಿಯಲ್ಲಿ ಹುಬ್ಬಳ್ಳಿಯ ಶ್ರೀ ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರು ಸಾವಿರ ಮಠದ ಮೆಡಿಕಲ್ ಕಾಲೇಜಿನ ಉದ್ಘಾಟನೆ ನೆರವೇರಿಸಿದರು.
ಅಮಿತ್ ಶಾ ಅವರ ಅನುಪಸ್ಥಿತಿಯಲ್ಲಿ ಪ್ರಲ್ಹಾದ್ ಜೋಶಿ ಹಾಗೂ ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಯವರು ಉದ್ಘಾಟನೆ ನೆರವೇರಿಸಿದರು.
PublicNext
19/09/2026 12:53 pm
LOADING...