ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಗವಾಡ: ಬರ ಪಟ್ಟಿಯಲ್ಲಿ ಕಾಗವಾಡ ಔಟ್!; ರೈತರು ಶಾಕ್, ಆಕ್ರೋಶ

ಕಾಗವಾಡ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿಗೆ ರಾಜ್ಯ ಸರ್ಕಾರ ಬರದ ಪರಿಹಾರದಿಂದ ವಂಚಿಸಿರುವುದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ತಾಲೂಕಿನಲ್ಲಿ ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿದ್ದರೂ, ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕಾಗವಾಡವನ್ನು ಕೈಬಿಟ್ಟಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಚಿಕ್ಕೋಡಿ ಉಪವಿಭಾಗದ ಬಹುತೇಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಕಾಗವಾಡಕ್ಕೆ ಮಾತ್ರ ಈ ಪಟ್ಟಿಯಲ್ಲಿ ಸ್ಥಾನ ನೀಡದಿರುವುದು ಏಕೆ ಎಂಬ ಪ್ರಶ್ನೆ ರೈತರನ್ನು ಕಾಡುತ್ತಿದೆ. ಮಳೆ ಅಭಾವದಿಂದ ಮುಸುಕಿನ ಜೋಳ, ಶೇಂಗಾ, ಉದ್ದು, ಸಜ್ಜೆ ಸೇರಿದಂತೆ ಹಲವು ಬೆಳೆಗಳು ಒಣಗಿ ರೈತರು ನಷ್ಟ ಅನುಭವಿಸಿದ್ದಾರೆ. ಆದರೂ ಸರ್ಕಾರದ ಬರ ಪರಿಹಾರದ ಮಾನದಂಡದಲ್ಲಿ ಕಾಗವಾಡವನ್ನು ಪರಿಗಣಿಸದಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಸಕ ರಾಜು ಕಾಗೆ ಅವರ ತವರು ಕ್ಷೇತ್ರವಾಗಿರುವ ಕಾಗವಾಡಕ್ಕೆ ಮಾತ್ರ ಸರ್ಕಾರದ ಬರದ ಕರುಣೆ ಸಿಗದಿರುವುದು ವಿಪರ್ಯಾಸ ಎಂದು ರೈತರು ಟೀಕಿಸಿದ್ದಾರೆ. ಬಯಲುಸೀಮೆಯ ರೈತರ ಸಂಕಷ್ಟ ಸರ್ಕಾರಕ್ಕೆ ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿರುವ ಅನ್ನದಾತರು, ಕಾಗವಾಡ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಿ ಅರ್ಹ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Edited By :
PublicNext

PublicNext

19/09/2026 07:00 pm

Cinque Terre

3.41 K

Cinque Terre

0

ಸಂಬಂಧಿತ ಸುದ್ದಿ