ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಸಿಎಂ ಸಂವಾದ ಕಾರ್ಯಕ್ರಮಕ್ಕೆ ಮಳೆ ಸಿಂಚನ – ಕೊಡೆ, ಕುರ್ಚಿಗಳೇ ಆಸರೆ!

ಶಿವಮೊಗ್ಗ : ತೀರ್ಥಹಳ್ಳಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಸಿಎಂ ಸಂವಾದ ಕಾರ್ಯಕ್ರಮದ ವೇಳೆ ದಿಢೀರನೆ ಧಾರಾಕಾರ ಮಳೆ ಸುರಿದಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನರಿಗೆ ತೀವ್ರ ಅಡಚಣೆ ಉಂಟಾಯಿತು. ರಾಜ್ಯದಲ್ಲಿ ತೀವ್ರ ಬರದ ವಾತಾವರಣ ನೆಲೆಸಿರುವ ಮಧ್ಯೆಯೇ, ತೀರ್ಥಹಳ್ಳಿಯಲ್ಲಿ ಎಡೆಬಿಡದೆ ಸುರಿದ ಮಳೆಯು ಒಂದೆಡೆ ಜನರಿಗೆ ಕಿರಿಕಿರಿ ಉಂಟು ಮಾಡಿದರೆ, ಇನ್ನೊಂದೆಡೆ ಹರ್ಷಕ್ಕೂ ಕಾರಣವಾಯಿತು.

ದಿಢೀರ್ ಮಳೆಯಿಂದಾಗಿ ರಕ್ಷಣೆ ಪಡೆಯಲು ಸೂಕ್ತ ವ್ಯವಸ್ಥೆ ಇಲ್ಲದೆ ಪರದಾಡಿದ ಸಾರ್ವಜನಿಕರು, ಕೈಯಲ್ಲಿದ್ದ ಕೊಡೆ ಹಾಗೂ ಪ್ಲಾಸ್ಟಿಕ್ ಕುರ್ಚಿಗಳನ್ನೇ ತಲೆ ಮೇಲೆ ಹಿಡಿದುಕೊಂಡು ಕಾರ್ಯಕ್ರಮದಲ್ಲಿ ಭಾಗಿಯಾದರು. ನಾಡಿನಲ್ಲಿ ಬರದ ಛಾಯೆ ಇರುವಾಗ ತೀರ್ಥಹಳ್ಳಿಯಲ್ಲಿ ಸುರಿದ ಧಾರಾಕಾರ ಮಳೆಯನ್ನು ಕಂಡು ವೇದಿಕೆಯಲ್ಲಿದ್ದ ಮುಖ್ಯಮಂತ್ರಿಗಳು ಡಿ.ಕೆ. ಶಿವಕುಮಾರ್ ಅವರು ಸಂತಸ ವ್ಯಕ್ತಪಡಿಸಿದರು.

Edited By : Vinayak Patil
Kshetra Samachara

Kshetra Samachara

19/09/2026 07:18 pm

Cinque Terre

780

Cinque Terre

0

ಸಂಬಂಧಿತ ಸುದ್ದಿ