ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎನ್.ಆರ್. ಪುರ : ಸಿಎಂ ಆದ ಬಳಿಕ ಮೊದಲ ಬಾರಿಗೆ ಕಾಫಿನಾಡಿಗೆ ಡಿಕೆಶಿ; ಕಸ್ತೂರಿ ರಂಗನ್ ಆತಂಕದಲ್ಲಿರುವ ರೈತರ ಅಹವಾಲು ಸ್ವೀಕಾರ

ಎನ್.ಆರ್. ಪುರ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಫಿನಾಡು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದಾರೆ. ತೀರ್ಥಹಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು, ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ರಂಭಾಪುರಿ ಮಠದ ಹೆಲಿಪ್ಯಾಡ್‌ಗೆ ಬಂದಿಳಿದರು.

ಈ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ಬಳಿಕ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮಾವೇಶಕ್ಕೆ ತೆರಳಿದರು.

ಇದೇ ವೇಳೆ ಕಸ್ತೂರಿ ರಂಗನ್ ವರದಿ ಜಾರಿಯಿಂದಾಗಿ ಆತಂಕದಲ್ಲಿರುವ ಜಿಲ್ಲೆಯ ಸುಮಾರು 137 ಗ್ರಾಮಗಳ ರೈತರನ್ನು ಭೇಟಿಯಾಗಿ, ಅವರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

Edited By :
PublicNext

PublicNext

19/09/2026 07:19 pm

Cinque Terre

4.45 K

Cinque Terre

0

ಸಂಬಂಧಿತ ಸುದ್ದಿ