ಎನ್.ಆರ್. ಪುರ: ಕಸ್ತೂರಿ ರಂಗನ್ ವರದಿ ಜಾರಿಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಳೆಹೊನ್ನೂರಿಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಸಂಗಮೇಶ್ವರಪೇಟೆಯಿಂದ ಬಾಳೆಹೊನ್ನೂರಿನವರೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು 12 ಕಿಲೋಮೀಟರ್ ದೂರ ಪಾದಯಾತ್ರೆ ನಡೆಸಿದರು.
ಬಾಳೆಹೊನ್ನೂರು ಬಸ್ ನಿಲ್ದಾಣದ ವೃತ್ತದ ಬಳಿ ಬೃಹತ್ ಸಂಖ್ಯೆಯಲ್ಲಿ ಜಮಾವಣೆಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ವರದಿಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ಚಿಕ್ಕಮಗಳೂರು ಪ್ರತಿನಿಧಿ ಡ್ಯಾನಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
PublicNext
19/09/2026 11:32 pm
LOADING...