ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ; ಸರ್ಕಾರದ ವಿರುದ್ಧ ಸಂಸದ ಯದುವೀರ್ ಕಿಡಿ

ಮೈಸೂರು: ರಾಜ್ಯದಲ್ಲಿ ಪ್ರತಿನಿತ್ಯ ವಿದ್ಯುತ್ ಸಮಸ್ಯೆ ಹೆಚ್ಚಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಕೊರತೆಯಿಂದ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಷ್ಟಾದರೂ ರಾಜ್ಯ ಸರ್ಕಾರ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ವಿಫಲವಾಗಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.

ಕರ್ನಾಟಕದಲ್ಲಿ ಮಾತ್ರ ಈ ರೀತಿಯ ವಿದ್ಯುತ್ ಸಮಸ್ಯೆ ಉಂಟಾಗಿದೆ ಎಂದು ಹೇಳಿದ ಅವರು, ಕರ್ನಾಟಕಕ್ಕೆ ಹೋಲಿಸಿದರೆ ಇತರೆ ಸಣ್ಣ ರಾಜ್ಯಗಳು ಹಾಗೂ ರಾಜ್ಯಕ್ಕಿಂತ ಹೆಚ್ಚಿನ ಬರಗಾಲ ಎದುರಿಸುತ್ತಿರುವ ರಾಜ್ಯಗಳಲ್ಲಿಯೂ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದರು.

ಆದರೆ ಕರ್ನಾಟಕದಲ್ಲಿ ಮಾತ್ರ ವಿದ್ಯುತ್ ಸಮಸ್ಯೆ ಉಂಟಾಗಿದ್ದು, ಇದನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸರ್ಕಾರದ ವಿರುದ್ಧ ಸಂಸದ ಯದುವೀರ್ ಕಿಡಿಕಾರಿದರು.

Edited By : Somashekar
PublicNext

PublicNext

19/09/2026 11:52 pm

Cinque Terre

4.8 K

Cinque Terre

0

ಸಂಬಂಧಿತ ಸುದ್ದಿ