ನವಲಗುಂದ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರ ಮಕ್ಕಳಿಗೆ ಈ ಆರ್ಥಿಕ ವರ್ಷದಲ್ಲಿ ಮಂಜೂರಾದ 35 ವಿದ್ಯಾರ್ಥಿಗಳಿಗೆ ಯೋಜನಾಧಿಕಾರಿ ದಿನೇಶ ಶೇರಿಗಾರ ಅವರು ಮಂಜೂರಾತಿ ಪತ್ರಗಳನ್ನು ವಿತರಿಸಿದರು. ಈ ವೇಳೆ ಕ್ಷೇತ್ರದ ಕಾರ್ಯಕ್ರಮಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದ ಅವರು, ತಾಲೂಕಿನಲ್ಲಿ 85 ವಿದ್ಯಾರ್ಥಿಗಳಿಗೆ ಶ್ರೀ ಕ್ಷೇತ್ರದಿಂದ ವಿದ್ಯಾರ್ಥಿವೇತನ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿನಾಯಕ, ಮಂಜುಳಾ, ಉಮೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Kshetra Samachara
20/09/2026 10:42 am
LOADING...