ನವದೆಹಲಿ: ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಹಲವು ಪ್ರಮುಖ ವ್ಯಕ್ತಿಗಳಿಗೂ ನೋಟಿಸ್ ನೀಡಲಾಗಿದೆ. ಭಾರತ ರತ್ನ ಪುರಸ್ಕೃತ ಬಿಜೆಪಿ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ, ವಿದೇಶಾಂಗ ಸಚಿವ ಎಸ್. ಜೈಶಂಕರ್, ಕಾಂಗ್ರೆಸ್ ಸಂಸದ ಕಪಿಲ್ ಸಿಬಲ್ ಸೇರಿದಂತೆ ಹಲವು ಗಣ್ಯರ ಹೆಸರುಗಳು ನೋಟಿಸ್ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ.
ವರದಿಗಳ ಪ್ರಕಾರ, ಚುನಾವಣಾ ದಾಖಲೆಗಳಲ್ಲಿನ ಹೆಸರುಗಳ ಮ್ಯಾಪಿಂಗ್ನಲ್ಲಿ ವ್ಯತ್ಯಾಸ ಅಥವಾ ಹಿಂದಿನ ಎಸ್ಐಆರ್ (SIR) ದಾಖಲೆಗಳೊಂದಿಗೆ ವಿವರಗಳನ್ನು ಹೊಂದಾಣಿಕೆ ಮಾಡಲು ಸಾಧ್ಯವಾಗದಿರುವುದು ಈ ನೋಟಿಸ್ಗೆ ಪ್ರಮುಖ ಕಾರಣವಾಗಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹಾಗೂ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರ ಹೆಸರುಗಳೂ ಈ ಪಟ್ಟಿಯಲ್ಲಿವೆ ಎಂದು ವರದಿಯಾಗಿದೆ.
ಚುನಾವಣಾ ಆಯುಕ್ತ ಎಸ್.ಎಸ್. ಸಂಧು ಅವರ ಹೆಸರಿನ ಕಾಗುಣಿತದಲ್ಲಿ ದಾಖಲೆ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿಯೂ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.
ಇದರೊಂದಿಗೆ ಸಚಿವ ಎಸ್. ಜೈಶಂಕರ್ ಅವರ ಪತ್ನಿ ಕೆ.ಎಸ್. ಜೈಶಂಕರ್ ಅವರ ಹೆಸರೂ ಪಟ್ಟಿಯಲ್ಲಿದ್ದು, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಕುಟುಂಬದ ಸದಸ್ಯರಿಗೂ ಎಸ್ಐಆರ್ ಅಡಿಯಲ್ಲಿ ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ.
ಆದಾಗ್ಯೂ, ಈ ರೀತಿ ನೋಟಿಸ್ ನೀಡಿರುವುದು ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲಾಗಿದೆ ಎಂದರ್ಥವಲ್ಲ. ದಾಖಲೆಗಳ ಸರಿಯಾದ ಪರಿಶೀಲನೆ ಹಾಗೂ ಅಗತ್ಯ ದಾಖಲೆಗಳನ್ನು ಒದಗಿಸಿ ಸಲ್ಲಿಸುವ ಪ್ರಕ್ರಿಯೆಯ ಒಂದು ಭಾಗವಾಗಿ ಈ ನೋಟಿಸ್ಗಳನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
PublicNext
20/09/2026 03:12 pm
LOADING...