ಕಾರ್ಕಳ : ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ 3.30ರ ಸುಮಾರಿಗೆ ಇನ್ನೋವಾ ಕಾರು ಹಾಗೂ ವಿಶಾಲ್ ಕಂಪನಿಯ ಬಸ್ ನಡುವೆ ಅಪಘಾತ ಸಂಭವಿಸಿದೆ.
ಇನ್ನೋವಾ ಕಾರಿನಲ್ಲಿ ಮಾಜಿ ಸಚಿವ ರಾಮನಾಥ ರೈ ಅವರು ತಮ್ಮ ಪಿಎ ಡೆನ್ಜೆಲ್ ಅವರೊಂದಿಗೆ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಡೆನ್ಜೆಲ್ ಅವರ ಬಲಗಾಲಿಗೆ ಮುರಿತವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೆನಪೋಯಾ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
PublicNext
20/09/2026 04:27 pm
LOADING...