ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೇಂದ್ರ ಅನುಮತಿ ನೀಡಿದರೆ ಮೂರೇ ದಿನಗಳಲ್ಲಿ ಮಹದಾಯಿ ಕಾಮಗಾರಿ ಆರಂಭ; ಶಾಸಕ ಕೋನರೆಡ್ಡಿ

ಧಾರವಾಡ: ಕೇಂದ್ರ ಸರಕಾರದ ವನ್ಯಜೀವಿ ಮಂಡಳಿ ಅನುಮತಿ ನೀಡಿದರೆ ಮಹಾದಾಯಿ ಯೋಜನೆಯ ಕಾಮಗಾರಿ ಶುರುವಾಗುತ್ತದೆ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ತಿಳಿಸಿದರು.

ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯ ಮಹದಾಯಿ ನ್ಯಾಯಾಧೀಕರಣ ತೀರ್ಪು ನೀಡಿದ್ದು, 13.42 ಟಿಎಂಸಿ ನೀರು ರಾಜ್ಯಕ್ಕೆ ದೊರೆತಿದೆ. ಕೇಂದ್ರ ಸರಕಾರದ ವನ್ಯಜೀವಿ ಮಂಡಳಿ ಅನುಮತಿ ನೀಡಿದರೆ ಕಾಮಗಾರಿ ಶುರುವಾಗುತ್ತದೆ. ನಮ್ಮ ಸರಕಾರ ಈಗಾಗಲೇ ತಯಾರಿ ಮಾಡಿಕೊಂಡಿದೆ.

ಮಹಾದಾಯಿ ಯೋಜನೆಗೆ ಟೆಂಡರ್ ಕರೆದು ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಕೂಡ ನೀಡಲಾಗಿದೆ. ಮೂರೇ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/09/2026 04:41 pm

Cinque Terre

4.08 K

Cinque Terre

0

ಸಂಬಂಧಿತ ಸುದ್ದಿ